Posts

Showing posts from 2015

ಮೌಢ್ಯತೆಯ ಪೆÇರೆ ಕಳಚಲು ಲೇಖನಿ ಹಿಡಿದ ಶಾಸ್ತ್ರಿಗಳು

ಮೌಢ್ಯತೆಯ ಪೆÇರೆ ಕಳಚಲು ಲೇಖನಿ ಹಿಡಿದ ಶಾಸ್ತ್ರಿಗಳು  - ಮಹೇಶ ಕಲಾಲ್ ಮೌಢ್ಯತೆಯ ಪೆÇರೆ ಕಳಚಿ ಸಾಹಿತ್ಯ ಗಂಗೆಯ ಹರಿಸಲು ಜನರನ್ನು ಪ್ರೇರೆಪಿಸಲೆಂಬಂತೆ ತಮ್ಮ ಮನೆಯ ಕಾರ್ಯವನ್ನು ಸಾರ್ವಜನಿಕವಾಗಿಸಿ ಆ ಸಮಯವನ್ನು  ಸಾಹಿತ್ಯ, ಚರ್ಚಾ ಕೂಟಗಳಿಗೆ ಸದ್ವಿನಿಯೋಗಿಸುತ್ತಿರುವ ಹಿರಿಯ ಸಾಹಿತಿ ಬಸವರಾಜ ಶಾಸ್ತ್ರಿಯವರ ಸೇವಾಕಾರ್ಯ ಶ್ಲಾಘನೀಯವಾದದ್ದು. ಕಸವು ರಸವಾಗಲಿ, ಧ್ಯೇಯೋz್ದÉೀಶಗಳು ಅದ್ವಿತೀಯ ಬೀಜಾಕ್ಷರಗಳಾಗಲಿ ಎಂಬ ದೃಷ್ಠಿಯಿಂದ ಪ್ರತಿಯೊಂದು ಕಾರ್ಯಕ್ಕೂ ಸಾಹಿತ್ಯ ಸೇವೆಯ ಅನುಪಮ ಅವಕಾಶವನ್ನು ಒದಗಿಸಿ, ಸಾಹಿತ್ಯ ಸೃಷ್ಠಿಯ ಜೊತೆಗೆ ವಾಗ್ದೇವಿಯ ವರಪುತ್ರರಿಗೆ ಆಹ್ವಾನವಿಯುತ್ತ ಇಳಿ ವಯಸ್ಸಿನಲ್ಲಯೂ ಕ್ರಿಯಾಶೀಲ ವ್ಯಕ್ತಿತ್ವದಿಂದ ಸದಾ ತಾ ಮುಂದು ಎನ್ನುವು ಘೋಷಾ ವಾಕ್ಯದೊಂದಿಗೆ ಹಗಲಿರುಳೂ ಸೇವಾಕೈಂಕರ್ಯದಲ್ಲಿ ತೊಡಗಿಸಿಕೊಂಡಿರುವ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಅವರ ಅದಲು-ಬದಲು ಕಥಾ ಸಂಕಲನ ಸತ್ಯದ ದಾರಿ ಹುಡುಕ ಹೊರಟ ಹರಿಶ್ಚಂದ್ರನ ಪಾಡಿನಂತಿದೆ. ಮಹಿಳೆಯನ್ನು ಇಳೆಯಷ್ಟು ಕ್ಷಮಾಗುಣ ಸಂಪನ್ನಳು ಎಂಬಂತೆ ಬಸವರಾಜ ಶಾಸ್ತ್ರಿಯವರು ಇಲ್ಲಿ ಚಿತ್ರಿಸಿದ್ದಾರೆ. ತಮ್ಮ ಹಲವು ಕಥೆಗಳಲ್ಲಿ ಸ್ತ್ರೀ ಪ್ರಾಧ್ಯಾನ್ಯತೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಪುರುಷ ಪಾತ್ರಗಳ ಪ್ರಭಾವವಿದ್ದರೂ ಅಲ್ಲಿಯೂ ಮಹಿಳೆಯೇ ಕಥಾವಸ್ತುವನ್ನು ಪ್ರತಿನಿಧಿಸುತ್ತಾಳೆ. ಅವರ ಮಗ್ಗಲಿಗೆ ಬೇಕು ಮನೆಗೆ ಬೇಡ, ತ್ಯಾಗ, ವಾತ್ಸಲ್ಯ, ಅದಲು -ಬದಲು...

ಕಣ್ಣೀರ ಕಡಲಲಿ ಕೃಷಿಕನ ತವರು

ಕಣ್ಣೀರ ಕಡಲಲಿ ಕೃಷಿಕನ ತವರು ನೇಗಿಲಯೋಗಿಯ ನೋಡಲ್ಲಿ  ಬಿತ್ತಿದ ಬೆಳೆಗೆ ಬೆಂಕಿಯ ಹಚ್ಚಿ ಅದರಲಿ ಹಾರಿ ಪ್ರಾಣವ ಬಿಟ್ಟನು ಹತ್ತಿ, ಕಬ್ಬು ಬೆಳೆಯಲು ಅವನು ಲಕ್ಷ ಸಾಲವ ಮಾಡಿಹನು ಫೈರಿಗೆ ಹಚ್ಚಿದ ಬೆಂಕಿಯಲಿ ಬೆಂದು ಭಸ್ಮವಾಗಿಹನು ಸಾಲವ ಕೊಟ್ಟರು ಶೂಲವ ಕೊಟ್ಟರು ಕೃಷಿಕನ ಬಾಳಿಗೆ ಬೆಂಕಿಯನಿಟ್ಟರು ಕಣ್ಣೀರ ಕಡಲಲಿ ಕೃಷಿಕನ ತವರು ಭಾಗ್ಯದ ಬೆನ್ನತ್ತಿರುವ ಸರ್ಕಾರಗಳು ರೈತನ ಜೋಳಿಗೆ ಖಾಲಿಯಿಟ್ಟು  ಹಂಗಿನ ಅರಮನೆ ಸೃಷ್ಠಿಸುತಿಹರು ಪರಿಹಾರ ನೆಪದಿ ಭೇಟಿಯನ್ನಿತ್ತರು ಮೊಸಳೆ ಕಣ್ಣೀರು ಸುರಿಸುತಿಹರು ಪುಡಿಗಾಸು ನೀಡಿ ಪೆÇೀಸು ಕೊಟ್ಟು ಪತ್ರಿಕೆಗಳಲಿ ರಾರಾಜಿಸುತಿಹರು ಅನ್ನವ ಬೆಳೆವ ಅನ್ನದಾತನು ಹಸಿವು ತಾಳದೆ ಆತ್ಮಹತ್ಯೆ ಹಾದಿ ಹಿಡಿದನು ... ಸಾಲದ ಋಣವು ಶೂಲವಾಗಿ ಬಾಳನು ನುಂಗಿತು ಮುಂದೆ ಸಾಗಿ   - ಮೌನಯೋಗಿ (ನನ್ನ ಮಾನಸ ಗುರು ಕವಿ ಕುವೆಂಪುರವರ ಕ್ಷಮೆ ಕೋರುತ್ತಾ)   

ಮೌನಯೋಗಿ:

ಮೌನಯೋಗಿ:
Image

ಮೌನಯೋಗಿ:

ಮೌನಯೋಗಿ:
Image
Image
Image
Image

ಆತ್ಮವಿಶ್ವಾಸಕ್ಕೊಂದು ಪುಸ್ತಕ ಹಿಡಿಯಿರಿ....

ಆತ್ಮವಿಶ್ವಾಸಕ್ಕೊಂದು ಪುಸ್ತಕ ಹಿಡಿಯಿರಿ.... * ನನಗೊಂದು ಅಭ್ಯಾಸವಿದೆ ಒಳ್ಳೆಯದೋ ಅಥವಾ ಕೆಟ್ಟದ್ದೋ ಗೊತ್ತಿಲ್ಲ. ಈ ಅಭ್ಯಾಸ ನನಗೆ ಪಿಯುಸಿಯಿಂದ ಅಂದರೆ 1996ರಿಂದ ಪ್ರಾರಂಭವಾಗಿದೆ. ಸದಾ ಯಾವಾಗಲೂ ಕೈಯಲ್ಲೊಂದು ಪುಸ್ತಕ ಹಿಡಿದಿರುವುದು. ಅದು ದಿನಕ್ಕೊಂದು ಹೊಸದಾಗಿದ್ದರೆ ನನ್ನಲ್ಲಿ ಇನ್ನು ಹೆಚ್ಚಿನ ಚೈತನ್ಯ ಇರುತ್ತದೆ ಎಂದು ಭಾವಿಸಿರುವವನು ನಾನು. ನನ್ನ ಕೆಲವು ಗೆಳೆಯರು ಹೇಳುತ್ತಾರೆ ಅಲ್ಲೋ ದಿನಾಲೂ ಯಾವಗಲೂ ಪುಸ್ತಕ ಕೈಯಲ್ಲಿ ಹಿಡಿದಿರುತ್ತಿಯಲ್ಲ ಅದು ಕೊಳಕಾಗಿ ಹಾಳಾಗುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ನದಿಯ ಮಧ್ಯೆಯಲ್ಲಿರುವ ಕಲ್ಲು ನೀರಿನ ಹರಿವಿನ ಸೆಳೆತಕ್ಕೆ ಶಿಲೆಯಂತಾಗುವುದಿಲ್ಲವೇ. ಅದು ಪಾಚಿಗಟ್ಟಿದ ಮಾತ್ರಕ್ಕೆ ಕೊಳಕಾಗುವುದೇ. ಸ್ವಚ್ಛ ಮತ್ತು ಸುಂದರವಾಗಿ ನಿರ್ಮಿಸಬೇಕಿರುವುದು ವ್ಯಕ್ತಿತ್ವವೇ ಹೊರತು ಪುಸ್ತಕವಲ್ಲ. ಪುಸ್ತಕ ಕೊಳಕಾಗುತ್ತದೆ (ಹಾಳಾಗದೆ) ಅಂತ ಅದನ್ನು ಹಾಗೆ ಇಟ್ಟಲ್ಲಿ ಅದರಲ್ಲಿನ ಸಂದೇಶವನ್ನು ಅರಿತುಕೊಳ್ಳುವುದು ಹೇಗೆ. ಪುಸ್ತಕ ಮನನವಾಗಬೇಕಿದ್ದಲ್ಲಿ ಅದನ್ನು ನಾವು ಉಪಯೋಗಿಸಲೇಬೇಕು. ಉಪಯೋಗಿಸಬೇಕೆಂದರೆ ಅದು ನಮ್ಮ ಬಳಿಯಲ್ಲಿರಬೇಕಲ್ಲವೇ. ಇಂದಿನ ಒತ್ತಡದ ಜೀವನದಲ್ಲಿ ಓದುವುದಕ್ಕಾಗಿಯೇ ಸಮಯ ನಿಗದಿ ಮಾಡಲು ಸಾಧ್ಯವೇ. ಓದುವುದು ನಮ್ಮ ಹವ್ಯಾಸವಾಗಬೇಕೇ ವಿನಹಃ ಅದು ಕರ್ತವ್ಯವಾಗಬಾರದು. ಹಾಗಾಗಿ ಪುಸ್ತಕ ನಮ್ಮ ಬಳಿ ಇರಬೇಕು ಅಂದ ಮೇಲೆ ಅದು ಕೊಳಕಾಗದೆ (ಹಾಳಾಗದೆ)ಇರಲು ಸ...
Image
Image
Image
Image

ಸುಳ್ಳಿನ ಸರಮಾಲೆ ಮುತ್ತು ಪೋಣಿಸಿದಂತೆ..........

ಒಂದು ಸುಳ್ಳಿನ ಕಥೆ.......... ಸುಳ್ಳಿನ ಸರಮಾಲೆ ಮುತ್ತು ಪೋಣಿಸಿದಂತೆ.......... ಬಾಲ್ಯದ ಮಾಸದ ನೆನಪುಗಳು, ಕಂಡ ಕನಸುಗಳು ಇನ್ನು ಹಸಿಯಾಗಿವೆ ಏನೋ ಎನಿಸುತ್ತಿವೆ. ತೀರಾ ಇತ್ತಿಚಿಗೆ ನಡೆದಿದೆಯೇನೋ ಎಂಬಂತೆ. ಹಸಿ ಸುಳ್ಳಿಗೆ ಹದಿನಾರು ಸಾವಿರ ದಾರಿಯಂತೆ. ನಿಜವೆ ಇರಬಹುದು. ಸುಳ್ಳು ಹೇಳುವುದು ಎಂದರೆ ಸುಲಭವಲ್ಲ ಅದೊಂದು ಕಲೆ. ವಂಶಪಾರಂಪರ್ಯವಾಗಿಯಾಗಲಿ ಅಥವಾ ಜನ್ಮದತ್ತವಾಗಿಯಾಗಲಿ ಬರುವ ಕಲೆಯಲ್ಲ ಅದೊಂದು ಅದ್ಭುತ ಕಲೆ ಎನ್ನಬಹದು. ಯಾಕೆಂದರೆ ಒಂದು ಬಾರಿ ಸುಳ್ಳು ಹೇಳಿದರೆ ಮುಗಿತು. ಅದರಿಂದ ತಪ್ಪಿಸಿಕೊಳ್ಳೋದು ಸಾಧ್ಯನಾ. ಇಲ್ಲ. ಒಂದಕ್ಕೊಂದು ಸುಳ್ಳು ಹೇಳುತ್ತಾ ಹೋಗುತ್ತಾ ಇರಬೇಕು ಅಷ್ಟೆ. ಅದೊಂದು ತರಹ ಮುತ್ತಿನ ಮಾಲೆಗೆ ಮಣಿಗಳನ್ನು ಪೊಣಿಸಿದಂತೆ ಒಂದು ವೇಳೆ ಸೀಮಿತವಾಗಿದ್ದರೆ ಮುತ್ತಿನ ಸರ ಚೆನ್ನಾಗಿರುತ್ತೆ. ಆದರೆ ಅದು ಕೂಡ ವಿಪರೀತವಾಗಿದ್ದರೆ ತನ್ನ ಕಳೆ ಮತ್ತು ಸೊಬಗನ್ನು ಕಳೆದುಕೊಳ್ಳುತ್ತದೆ. ನೀವೆ ಯೋಚಿಸಿ ಸುಳ್ಳನ್ನು ಸುಲಭವಾಗಿ ಹೇಳಲು ಸಾಧ್ಯನಾ. ಹಾಗಂತ ಸುಳ್ಳು ಹೇಳದೆ ಇರುವುದು ಸಾಧ್ಯನಾ. ನನಗಂತು ಸಾಧ್ಯವಿಲ್ಲ ಅನ್ನಿಸುತ್ತೆ. ಸತ್ಯವನ್ನು ತಲೆ ಮೇಲೆ ಹೊಡೆದಂತೆ ಹೇಳಬಹದು ಅಂತ ಹಿರಿಯರು ಹೇಳ್ತಾರೆ. ಬರಿ ಸತ್ಯ ಹೇಳುತ್ತಾ ಜೀವನದಲ್ಲಿ ಸುಳ್ಳು ಹೇಳದೆ ಇರುವುವವರು ಉಂಟಾ. ಬರಿ ಸುಳ್ಳು ಹೇಳುತ್ತಾ ಇರುವುವರು ಉಂಟಾ. ಸತ್ಯ ಮತ್ತು ಸುಳ್ಳು ಒಂದು ನಾಣ್ಯದ ಎರಡು ಮುಖದಂತೆ ಎನ್ನುವುದು ನನ್ನ ಅನಿಸಿಕ...