Posts

Showing posts from September, 2015

ಮೌಢ್ಯತೆಯ ಪೆÇರೆ ಕಳಚಲು ಲೇಖನಿ ಹಿಡಿದ ಶಾಸ್ತ್ರಿಗಳು

ಮೌಢ್ಯತೆಯ ಪೆÇರೆ ಕಳಚಲು ಲೇಖನಿ ಹಿಡಿದ ಶಾಸ್ತ್ರಿಗಳು  - ಮಹೇಶ ಕಲಾಲ್ ಮೌಢ್ಯತೆಯ ಪೆÇರೆ ಕಳಚಿ ಸಾಹಿತ್ಯ ಗಂಗೆಯ ಹರಿಸಲು ಜನರನ್ನು ಪ್ರೇರೆಪಿಸಲೆಂಬಂತೆ ತಮ್ಮ ಮನೆಯ ಕಾರ್ಯವನ್ನು ಸಾರ್ವಜನಿಕವಾಗಿಸಿ ಆ ಸಮಯವನ್ನು  ಸಾಹಿತ್ಯ, ಚರ್ಚಾ ಕೂಟಗಳಿಗೆ ಸದ್ವಿನಿಯೋಗಿಸುತ್ತಿರುವ ಹಿರಿಯ ಸಾಹಿತಿ ಬಸವರಾಜ ಶಾಸ್ತ್ರಿಯವರ ಸೇವಾಕಾರ್ಯ ಶ್ಲಾಘನೀಯವಾದದ್ದು. ಕಸವು ರಸವಾಗಲಿ, ಧ್ಯೇಯೋz್ದÉೀಶಗಳು ಅದ್ವಿತೀಯ ಬೀಜಾಕ್ಷರಗಳಾಗಲಿ ಎಂಬ ದೃಷ್ಠಿಯಿಂದ ಪ್ರತಿಯೊಂದು ಕಾರ್ಯಕ್ಕೂ ಸಾಹಿತ್ಯ ಸೇವೆಯ ಅನುಪಮ ಅವಕಾಶವನ್ನು ಒದಗಿಸಿ, ಸಾಹಿತ್ಯ ಸೃಷ್ಠಿಯ ಜೊತೆಗೆ ವಾಗ್ದೇವಿಯ ವರಪುತ್ರರಿಗೆ ಆಹ್ವಾನವಿಯುತ್ತ ಇಳಿ ವಯಸ್ಸಿನಲ್ಲಯೂ ಕ್ರಿಯಾಶೀಲ ವ್ಯಕ್ತಿತ್ವದಿಂದ ಸದಾ ತಾ ಮುಂದು ಎನ್ನುವು ಘೋಷಾ ವಾಕ್ಯದೊಂದಿಗೆ ಹಗಲಿರುಳೂ ಸೇವಾಕೈಂಕರ್ಯದಲ್ಲಿ ತೊಡಗಿಸಿಕೊಂಡಿರುವ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಅವರ ಅದಲು-ಬದಲು ಕಥಾ ಸಂಕಲನ ಸತ್ಯದ ದಾರಿ ಹುಡುಕ ಹೊರಟ ಹರಿಶ್ಚಂದ್ರನ ಪಾಡಿನಂತಿದೆ. ಮಹಿಳೆಯನ್ನು ಇಳೆಯಷ್ಟು ಕ್ಷಮಾಗುಣ ಸಂಪನ್ನಳು ಎಂಬಂತೆ ಬಸವರಾಜ ಶಾಸ್ತ್ರಿಯವರು ಇಲ್ಲಿ ಚಿತ್ರಿಸಿದ್ದಾರೆ. ತಮ್ಮ ಹಲವು ಕಥೆಗಳಲ್ಲಿ ಸ್ತ್ರೀ ಪ್ರಾಧ್ಯಾನ್ಯತೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಪುರುಷ ಪಾತ್ರಗಳ ಪ್ರಭಾವವಿದ್ದರೂ ಅಲ್ಲಿಯೂ ಮಹಿಳೆಯೇ ಕಥಾವಸ್ತುವನ್ನು ಪ್ರತಿನಿಧಿಸುತ್ತಾಳೆ. ಅವರ ಮಗ್ಗಲಿಗೆ ಬೇಕು ಮನೆಗೆ ಬೇಡ, ತ್ಯಾಗ, ವಾತ್ಸಲ್ಯ, ಅದಲು -ಬದಲು...

ಕಣ್ಣೀರ ಕಡಲಲಿ ಕೃಷಿಕನ ತವರು

ಕಣ್ಣೀರ ಕಡಲಲಿ ಕೃಷಿಕನ ತವರು ನೇಗಿಲಯೋಗಿಯ ನೋಡಲ್ಲಿ  ಬಿತ್ತಿದ ಬೆಳೆಗೆ ಬೆಂಕಿಯ ಹಚ್ಚಿ ಅದರಲಿ ಹಾರಿ ಪ್ರಾಣವ ಬಿಟ್ಟನು ಹತ್ತಿ, ಕಬ್ಬು ಬೆಳೆಯಲು ಅವನು ಲಕ್ಷ ಸಾಲವ ಮಾಡಿಹನು ಫೈರಿಗೆ ಹಚ್ಚಿದ ಬೆಂಕಿಯಲಿ ಬೆಂದು ಭಸ್ಮವಾಗಿಹನು ಸಾಲವ ಕೊಟ್ಟರು ಶೂಲವ ಕೊಟ್ಟರು ಕೃಷಿಕನ ಬಾಳಿಗೆ ಬೆಂಕಿಯನಿಟ್ಟರು ಕಣ್ಣೀರ ಕಡಲಲಿ ಕೃಷಿಕನ ತವರು ಭಾಗ್ಯದ ಬೆನ್ನತ್ತಿರುವ ಸರ್ಕಾರಗಳು ರೈತನ ಜೋಳಿಗೆ ಖಾಲಿಯಿಟ್ಟು  ಹಂಗಿನ ಅರಮನೆ ಸೃಷ್ಠಿಸುತಿಹರು ಪರಿಹಾರ ನೆಪದಿ ಭೇಟಿಯನ್ನಿತ್ತರು ಮೊಸಳೆ ಕಣ್ಣೀರು ಸುರಿಸುತಿಹರು ಪುಡಿಗಾಸು ನೀಡಿ ಪೆÇೀಸು ಕೊಟ್ಟು ಪತ್ರಿಕೆಗಳಲಿ ರಾರಾಜಿಸುತಿಹರು ಅನ್ನವ ಬೆಳೆವ ಅನ್ನದಾತನು ಹಸಿವು ತಾಳದೆ ಆತ್ಮಹತ್ಯೆ ಹಾದಿ ಹಿಡಿದನು ... ಸಾಲದ ಋಣವು ಶೂಲವಾಗಿ ಬಾಳನು ನುಂಗಿತು ಮುಂದೆ ಸಾಗಿ   - ಮೌನಯೋಗಿ (ನನ್ನ ಮಾನಸ ಗುರು ಕವಿ ಕುವೆಂಪುರವರ ಕ್ಷಮೆ ಕೋರುತ್ತಾ)   

ಮೌನಯೋಗಿ:

ಮೌನಯೋಗಿ:
Image

ಮೌನಯೋಗಿ:

ಮೌನಯೋಗಿ:
Image
Image
Image